-->
PUTTUR: ಕಾಣಿಯೂರು ಅನೈತಿಕ ಪೊಲೀಸ್ ಗಿರಿ ಪ್ರಕರಣ: ಸೂಕ್ತ ತನಿಖೆಗೆ SDPI ಆಗ್ರಹ

PUTTUR: ಕಾಣಿಯೂರು ಅನೈತಿಕ ಪೊಲೀಸ್ ಗಿರಿ ಪ್ರಕರಣ: ಸೂಕ್ತ ತನಿಖೆಗೆ SDPI ಆಗ್ರಹ

 




ಸುಳ್ಯ: ಕಡಬ ತಾಲೂಕಿನ ಕಾಣಿಯೂರು ಸಮೀಪದ ದೋಳ್ಪಾಡಿ ಬಳಿ ಕಾರಿನಲ್ಲಿ ಜವಳಿ ವ್ಯಾಪಾರ ನಡೆಸುತ್ತಿದ್ದ ಇಬ್ಬರು ಯುವಕರ ಮೇಲೆ ಸಂಘಪರಿವಾರದ ಗುಂಪು ವ್ಯಾಪಾರಕ್ಕೆ ತಡೆಯೊಡ್ಡಿ ಎರಡು ತಾಸುಗಳ ಕಾಲ ಗಂಭೀರವಾಗಿ ಮಾರಣಾಂತಿಕ ಹಲ್ಲೆ ನಡೆಸಿ ಕಾರಿಗೆ ಹಾನಿಗೊಳಿಸಿದ ಘಟನೆಯನ್ನು ಎಸ್ ಡಿಪಿಐ ತೀವ್ರವಾಗಿ ಖಂಡಿಸಿದೆ.

ಹಲವಾರು ವರ್ಷಗಳಿಂದ  ಜವಳಿ ವ್ಯಾಪಾರ ನಡೆಸುತ್ತಿರುವ ಯುವಕರು ದಕ್ಷಿಣ ಕನ್ನಡ ಜಿಲ್ಲೆಯವರೇ ಆಗಿದ್ದಾರೆ. ಆದರೆ,  ವ್ಯಾಪಾರಿಗಳು ಮುಸ್ಲಿಮರೆಂಬ ಕಾರಣಕ್ಕೆ ಬಿಜೆಪಿಯ ಕಾರ್ಯಕರ್ತರು ಇವರ ಮೇಲೆ  ಮಾರಣಾಂತಿಕ ಗುಂಪು ಹಲ್ಲೆ ನಡೆಸಿದ್ದಾರೆ. ನಂತರ ಮಹಿಳೆಯ ಮೇಲೆ ಕೈ ಹಾಕಿದ್ದಾರೆ ಎಂಬ ಕಟ್ಟು ಕಥೆಗಳನ್ನು ಕಟ್ಟಿ ಆರೋಪಿಗಳು ಸುರಕ್ಷಿತರಾಗಿದ್ದು, ಹಲ್ಲೆಗೊಳಗಾದವರ ಮೇಲೆಯೇ ಪ್ರಕರಣ ದಾಖಲಾಗಿರುವುದು ಖೇದಕರ. 

ಆದುದರಿಂದ ಪೊಲೀಸ್ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಇವರ ಕಟ್ಟು ಕಥೆಯನ್ನು ಬೇಧಿಸಿ ಹಲ್ಲೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಎಸ್ ಡಿಪಿಐ ಸುಳ್ಯ ವಿಧಾನ ಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಇಕ್ಬಾಲ್ ಬೆಳ್ಳಾರೆ ಆಗ್ರಹಿಸಿದ್ದಾರೆ.

ಘಟನೆ ಸಂಬಂಧ ಹಲ್ಲೆಕೋರರ ವಿರುದ್ಧ ಬೆಳ್ಳಾರೆ ಠಾಣೆಯಲ್ಲಿ ಹಲ್ಲೆ ಹಾಗೂ ಇನ್ನಿತರ ಸೆಕ್ಷನ್ ಅಡಿ ಗುಂಪು ಹಲ್ಲೆಗೊಳಗಾದ ರಮೀಝುದ್ದೀನ್ ನೀಡಿದ ದೂರಿನಂತೆ‌ ಪ್ರಕರಣ ದಾಖಲಿಸಿಕೊಂಡಿದ್ದಾಗಿ ತಿಳಿದು ಬಂದಿದೆ.

Ads on article

Advertise in articles 1

advertising articles 2

Advertise under the article