
Mangaluru: ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್; ಘಟನಾ ಸ್ಥಳಕ್ಕೆ ಗೃಹ ಸಚಿವ, ಡಿಜಿಪಿ ಭೇಟಿ, ಪರಿಶೀಲನೆ
Wednesday, November 23, 2022
ಮಂಗಳೂರು:
ಆಟೊ ಬಾಂಬ್ ಸ್ಫೋಟ ನಡೆದ ಘಟನಾ ಸ್ಥಳಕ್ಕೆ
ಗೃಹ ಸಚಿವ ಆರಗ ಜ್ಞಾನೇಂದ್ರ ಪೊಲೀಸ್ ಅಧಿಕಾರಿಗಳ ಜೊತೆಗೆ ಭೇಟಿ ನೀಡಿದರು.
ಬುಧವಾರ ಭೇಟಿ ನೀಡಿದ ಗೃಹ ಸಚಿವರು, ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ಸಂದರ್ಭ ಡಿಜಿಪಿ ಪ್ರವೀಣ್ ಸೂದ್ ಕೂಡಾ ಹಾಜರಿದ್ದು ಗಹ ಸಚಿವರಿಗೆ ಮಾಹಿತಿ ನೀಡಿದರು. ಈ ಸಂದರ್ಭ ಐಜಿಪಿ ಚಂದ್ರಗುಪ್ತ, ನಗರ ಪೊಲೀಸ್ ಆಯುಕ್ತ ಶಶಿ ಕುಮಾರ್, ಡಿಸಿಪಿ ಅನ್ಶು ಕುಮಾರ್ ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು.