-->
ಮಂಗಳೂರು: ಜಲೀಲ್ ಹತ್ಯೆ ಪ್ರಕರಣ; ಮೂವರು ಪ್ರಮುಖ ಆರೋಪಿಗಳು ಅರೆಸ್ಟ್!

ಮಂಗಳೂರು: ಜಲೀಲ್ ಹತ್ಯೆ ಪ್ರಕರಣ; ಮೂವರು ಪ್ರಮುಖ ಆರೋಪಿಗಳು ಅರೆಸ್ಟ್!



ಮಂಗಳೂರು: ಕಾಟಿಪಳ್ಳ ಜಲೀಲ್ ಕೊಲೆ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದಾಗಿ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. 

ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಟಿಪಳ್ಳ ಜಲೀಲ್ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನ ವಶಕ್ಕೆ ಪಡೆದಿದ್ದೇವೆ. ಸದ್ಯ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಮಾಡಿದ್ದೇವೆ. 14 ದಿನ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತೇವೆ. ಇವರಲ್ಲಿ ಇಬ್ಬರು ನೇರ ಭಾಗಿಯಾಗಿದ್ದು, ಓರ್ವ ಅವರನ್ನು ಬೈಕ್ ನಲ್ಲಿ ತಂದು ಬಿಟ್ಟಿದ್ದ.

ಗುರುತು ಪತ್ತೆ ಆಗೋವರೆಗೂ ಆರೋಪಿಗಳ ಮಾಹಿತಿ ನೀಡದಿರಲು ನಿರ್ಧರಿಸಿದ್ದಾಗಿ ಕಮೀಷನರ್ ತಿಳಿಸಿದ್ದಾರೆ.

ಮೂವರನ್ನು ಭಾನುವಾರ ರಾತ್ರಿ ವಶಕ್ಕೆ ಪಡೆಯಲಾಗಿದೆ. ಕೊಲೆಗೆ ಕಾರಣ ಏನು ಅನ್ನೋದನ್ನ ಪೂರ್ಣ ತನಿಖೆ ಬಳಿಕ ತಿಳಿಸುವುದಾಗಿ ಹೇಳಿದ್ದಾರೆ. ಮೂವರಲ್ಲಿ ಇಬ್ಬರು ಈ ಹಿಂದೆ ಹಲವು ಪ್ರಕರಣಗಳ ಆರೋಪಿಗಳೂ ಆಗಿದ್ದಾರೆ. 2021ರಲ್ಲಿ ನಡೆದ ಕೊಲೆ ಯತ್ನ ಕೇಸ್ ವೊಂದರಲ್ಲಿ ಇದ್ದರು. ಜಲೀಲ್ ಕೇಸ್ ನಲ್ಲಿ ಮಹಿಳೆಯರೂ ಸೇರಿ 10-12 ಜನರನ್ನ ವಶಕ್ಕೆ ಪಡೆದಿದ್ದೆವು. ಜಲೀಲ್ ಕುಟುಂಬಸ್ಥರು ಸೇರಿ ಕೆಲವರ ವಿಚಾರಣೆ ನಡೆದಿದೆ ಎಂದು ಕಮೀಷನರ್ ತಿಳಿಸಿದ್ದಾರೆ. 

ಶನಿವಾರ ರಾತ್ರಿ 8 ಗಂಟೆ ವೇಳೆಗೆ ಚಾಕುವಿನಿಂದ ಇರಿದು ಕಾಟಿಪಳ್ಳ 4 ನೇ ಬ್ಲಾಕ್ ನಲ್ಲಿ ಜಲೀಲ್ ಹತ್ಯೆಗೈಯ್ಯಲಾಗಿತ್ತು.

Ads on article

Advertise in articles 1

advertising articles 2

Advertise under the article