-->
ಸುಳ್ಯ: ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿನಿಯ ರ್ಯಾಗಿಂಗ್; ವೈದ್ಯಕೀಯ ವಿದ್ಯಾರ್ಥಿಗಳ ಅಟ್ಟಹಾಸ!

ಸುಳ್ಯ: ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿನಿಯ ರ್ಯಾಗಿಂಗ್; ವೈದ್ಯಕೀಯ ವಿದ್ಯಾರ್ಥಿಗಳ ಅಟ್ಟಹಾಸ!

 


ಸುಳ್ಯ: ಇಲ್ಲಿನ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ಸರ್ಕಾರಿ ಸೀಟ್ ವಿಚಾರವಾಗಿ ಡೆಂಟಲ್ ವಿದ್ಯಾರ್ಥಿನಿಗೆ ಕಿರುಕುಳ ನೀಡಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಸಂಬಂಧ ಕೇರಳ ಮೂಲದ ಆರು ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಾಗಿದೆ.

ಬೆಂಗಳೂರಿನ ವೈಟ್ ಫೀಲ್ಡ್ ನಿವಾಸಿ, ಮೂರನೇ ವರ್ಷದ ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಸಂತ್ರಸ್ತೆಯಾಗಿದ್ದಾರೆ. ಕೇರಳ ಮೂಲದ ಆರು ವಿದ್ಯಾರ್ಥಿಗಳ ವಿರುದ್ಧ ರ್ಯಾಗಿಂಗ್ ಮತ್ತು ಪರಿಶಿಷ್ಟ ಜಾತಿ ದೌರ್ಜನ್ಯ ತಡೆ ಕಾಯ್ದೆಯಡಿ ಕೇಸು ದಾಖಲಾಗಿದೆ.

ಮೂರನೇ ವರ್ಷದ ಡೆಂಟಲ್ ವಿದ್ಯಾರ್ಥಿ ವಿಶಾಖ್, ಡಾ.ವಿಶಾಕ್, ಐಶ್ವರ್ಯ, ಐಲ್ಪಾ ಮೇರಿ ಮ್ಯಾಥ್ಯೂ, ಡೆನಲ್ ಸೆಬಾಸ್ಟಿಯನ್, ರಿಷಿಕೇಸ್, ದಯಾ ವರ್ಗೀಸ್ ವಿರುದ್ಧ ಸುಳ್ಯ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂತ್ರಸ್ತೆಯು ಕೇರಳ ಮೂಲದ 6 ವಿದ್ಯಾರ್ಥಿಗಳಿಂದ ನಿರಂತರ ಕಿರುಕುಳ, ರಾಗಿಂಗ್ ಮಾತ್ರವಲ್ಲದೆಹಲ್ಲೆಗೀಡಾಗಿದ್ದಾಗಿ ದೂರು ನೀಡಿದ್ದಾರೆ.ಪರಿಶಿಷ್ಟ ಜಾತಿ ಮೆರಿಟ್ನಲ್ಲಿ ಕಾಲೇಜಿನಲ್ಲಿ ಸೀಟು ಪಡೆದಿದ್ದ ಪಲ್ಲವಿಯನ್ನು ಇದೇ ವಿಚಾರವಾಗಿ ಕಿರುಕುಳ ನೀಡುತ್ತಿದ್ದರೆಂದು ಆರೋಪ ಮಾಡಿದ್ದಾರೆ. ಸಂಬಂಧ ಪ್ರಿನ್ಸಿಪಾಲ್ ಮತ್ತು HODಗೆ ದೂರು ನೀಡಿದ್ರೂ ಯಾವುದೇ ಪ್ರಯೋಜನವಾಗಿಲ್ಲ. ಡಿ. 21ನೇ ತಾರೀಖು ಅಣ್ಣ ಮತ್ತು ನನ್ನ ಮೇಲೆ ಹಲ್ಲೆ ಮಾಡಿದರು. ನಾನು ಮತ್ತು ನಮ್ಮಣ್ಣ ಊಟ ಮುಗಿಸಿ ವಾಪಸ್ ಬರುತ್ತಿದ್ದಾಗ ಕೆಟ್ಟ ಪದಗಳಿಂದ ನಿಂದನೆ ಮಾಡಿದರು. ಸಮಯದಲ್ಲಿ ನಮ್ಮ ಅಣ್ಣ ಪ್ರಶ್ನೆ ಮಾಡಿದ್ದಕ್ಕೆ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ನಾವು ಕೂಡಲೇ ಕಾಲೇಜು ಪ್ರಿನ್ಸಿಪಾಲ್ ಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದೇವೆ. ಅಲ್ಲಿಂದ ನೇರವಾಗಿ ಆಸ್ಪತ್ರೆಗೆ ಚಿಕಿತ್ಸೆಗೆ ಹೋಗಿದ್ವಿ. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಾಗಿದ್ದೆ. ಘಟನೆಯ ಬಗ್ಗೆ ಡಿಪಾರ್ಟ್ಮೆಂಟ್ HODಗೆ ತಿಳಿಸಿದ್ದೇವೆ. ಆದರೂ ಕಾಲೇಜು ಆಡಳಿತ ಮಂಡಳಿ ಬಗ್ಗೆ ಯಾವ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.

ಕಿರುಕುಳದಿಂದ ಮಾನಸಿಕಖಿನ್ನತೆಗೆ ಒಳಗಾಗಿರೋ ಸಂತ್ರಸ್ತೆ ಬೆಂಗಳೂರಿನಲ್ಲಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಿಗೆ ಬಲ ಕಿವಿ 62% ಕಿವುಡು ಹಾಗೂ ಮೂತ್ರದಲ್ಲಿ ರಕ್ತಸ್ರಾವ ಬಲಕೈ ಸ್ವಾಧೀನ ಕಳೆದುಕೊಂಡಿದೆ. ಇಷ್ಟಾದರೂ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ.

ಒಟ್ಟು 3 ವರ್ಷಗಳ ಡೆಂಟಲ್ ಮೆಡಿಕಲ್ ಕೋರ್ಸ್ನಲ್ಲಿ 6 ತಿಂಗಳ ಓದು ಬಾಕಿ ಇದೆ. ಮುಂದಿನ ತಿಂಗಳು ಪ್ರಾಯೋಗಿಕ ಪರೀಕ್ಷೆ ಇದೆ. ಮುಂದೆ ಕಾಲೇಜಿಗೆ ಹೋಗೊಕೆ ಭಯ ಆಗ್ತಿದೆ. ಮತ್ತೆ ಕಾಲೇಜಿಗೆ ಹೇಗೆ ಬರ್ತೀಯಾ ಬಾ ಅಂತ ಜೀವ ಬೆದರಿಕೆ ಹಾಕಿದ್ದಾರೆ. ನನ್ನ ಮೇಲೆ ಹಲ್ಲೆ ಮಾಡಿದವರಿಗೆ ಶಿಕ್ಷೆ ಆಗ್ಬೇಕು. ನನ್ನನ್ನ ಬೇರೆ ಕಾಲೇಜಿಗೆ ಶಿಫ್ಟ್ ಮಾಡಿ, ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಿ. ನಾನು ಮತ್ತೆ ಸುಳ್ಯದ ಜಿವಿಕೆ ಕಾಲೇಜಿಗೆ ಹೋದ್ರೆ ಸಾಯಿಸಿಬಿಡ್ತಾರೆ ಅನ್ನೋ ಭಯ ಇದೆ ಎಂದು ಹಲ್ಲೆಗೊಳಗಾದ ವಿದ್ಯಾರ್ಥಿನಿ ನೋವು ತೋಡಿಕೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article