-->
ಮುಡಿಪು: ನಿರ್ಲಕ್ಷ್ಯತನದ ಡ್ರೈವಿಂಗ್ ಗೆ ಬಾಲಕ ಬಲಿ; ಕಾರು ಚಾಲಕ ಪೊಲೀಸ್ ವಶಕ್ಕೆ

ಮುಡಿಪು: ನಿರ್ಲಕ್ಷ್ಯತನದ ಡ್ರೈವಿಂಗ್ ಗೆ ಬಾಲಕ ಬಲಿ; ಕಾರು ಚಾಲಕ ಪೊಲೀಸ್ ವಶಕ್ಕೆ


ಮಂಗಳೂರು: ಸಂಜೆ ಶಾಲೆ ಬಿಟ್ಟು ಬಸ್ ಗಾಗಿ ರಸ್ತೆ ಬದಿ ಕಾಯುತ್ತಿದ್ದ ಸಂದರ್ಭ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮುಡಿಪು ಜ್ಯೂನಿಯರ್ ಕಾಲೇಜು ಬಳಿ ನಡೆದಿದೆ.

ಮಂಗಳವಾರ ಸಾಯಂಕಾಲ 4.10ರ ವೇಳೆಗೆ ಈ ಘಟನೆ ನಡೆದಿದ್ದು, ಪಜೀರು ನಿವಾಸಿ ಹರೀಶ್ಚಂದ್ರ ಎಂಬವರ ಪುತ್ರ ಕಾರ್ತಿಕ್ ಹೆಚ್. (12) ಮೃತ ಬಾಲಕನಾಗಿದ್ದಾನೆ. 8 ನೇ ತರಗತಿಯಲ್ಲಿ ಕಲಿಯುತ್ತಿರುವ ಕಾರ್ತಿಕ್ ಸಾಯಂಕಾಲ ಶಾಲೆ ಬಿಟ್ಟು ಮನೆಗೆ ತೆರಳುವ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಅತ್ಯಂತ ನಿರ್ಲಕ್ಷ್ಯದಿಂದ ಚಾಲನೆ ಮಾಡಿಕೊಂಡು ಬಂದ ಬ್ರೇಝಾ ಕಾರೊಂದು ಮೊದಲು ಬ್ಯಾರಿಕೇಡ್, ಬೈಕ್, ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ಬಳಿಕ ಅಲ್ಲೇ ನಿಂತಿದ್ದ ಕಾರ್ತಿಕ್ ಮೇಲೆ ಹರಿದು ಮುಂದೆ ಸಾಗಿದೆ. ಈ ಸಂದರ್ಭ ಕಾರ್ತಿಕ್ ತಲೆಗೆ ಗಂಭೀರ ಗಾಯವಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾಗಿ ತಿಳಿದು ಬಂದಿದೆ. ಬೇಜವಾಬ್ದಾರಿತನದಿಂದ ಕೂಡಿದ ಕಾರು ಚಾಲನೆ ಹಾಗೂ ಡಿಕ್ಕಿ ಹೊಡೆದ ದೃಶ್ಯಗಳು ಸ್ಥಳೀಯ ಅಂಗಡಿಯ ಸಿಸಿಟವಿಯಲ್ಲಿ ಸೆರೆಯಾಗಿದೆ. 

ಈ ಕುರಿತು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಅಬ್ದುಲ್ ರಹಿಮಾನ್ ಎಂಬವರು ಪ್ರಕರಣ ದಾಖಲಿಸಿದ್ದಾರೆ. ಕಾರು ಚಲಾಯಿಸುತ್ತಿದ್ದವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.  

Ads on article

Advertise in articles 1

advertising articles 2

Advertise under the article