-->
ಕಾರ್ಕಳದಿಂದ ಪ್ರಮೋದ್ ಮುತಾಲಿಕ್ ಸ್ಪರ್ಧೆ ಅಧಿಕೃತ ಘೋಷಣೆ; ಬಿಜೆಪಿ ವಿರುದ್ಧ ವಾಗ್ದಾಳಿ!

ಕಾರ್ಕಳದಿಂದ ಪ್ರಮೋದ್ ಮುತಾಲಿಕ್ ಸ್ಪರ್ಧೆ ಅಧಿಕೃತ ಘೋಷಣೆ; ಬಿಜೆಪಿ ವಿರುದ್ಧ ವಾಗ್ದಾಳಿ!



ಉಡುಪಿ: ಭಾರೀ ಊಹಾಪೋಹಗಳಿಗೆ ಕಾರಣವಾಗಿದ್ದ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ತಾನು ಚುನಾವಣೆ ಎದುರಿಸುವುದಾಗಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.

ಈ ಕುರಿತು ಕಾರ್ಕಳದ ಖಾಸಗಿ ಹೊಟೇಲ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಾನು ಕಾರ್ಕಳದಿಂದಲೇ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ‌‌‌. ಸಾವಿರಾರು ಕಾರ್ಯಕರ್ತರ ಒತ್ತಡದಿಂದ ನೋವಿನ ಧ್ವನಿಯಾಗಿ ಈ ಘೋಷಣೆ ಮಾಡುತ್ತಿದ್ದೇನೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಘೋಷಿಸಿದ್ದಾರೆ. 

ಬಿಜೆಪಿ ವಿರುದ್ಧ ಕೆಂಡ

" ಏಳೆಂಟು ಬಾರಿ ಕ್ಷೇತ್ರವನ್ನು ಸುತ್ತಾಡಿದ್ದೇನೆ‌, ಜನ ಬೆಂಬಲಿಸಿದ್ದಾರೆ‌‌. ಕ್ಷೇತ್ರದಲ್ಲಿರುವ ಹಿಂದೂಗಳಿಗೆ ನೋವಾಗಿದೆ,  ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಹಿಂದುತ್ವ ಭ್ರಷ್ಟಾಚಾರ ವಿರುದ್ಧ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನಾನು ಬಿಜೆಪಿ ಹಾಗೂ ಬಿಜೆಪಿ ಸಿದ್ಧಾಂತದ ವಿರೋಧಿ ಅಲ್ಲ. ಬಿಜೆಪಿಯೊಳಗಿನ ಕೆಲ ವ್ಯಕ್ತಿಗಳ ತತ್ವ ಸಿದ್ಧಾಂತ ವಿರುದ್ಧ ನನ್ನ ಹೋರಾಟ. ಬಿಜೆಪಿ ಅಂದು ಮಾಡಿದ ಅವಮಾನ ಎಂದಿಗೂ ಮರೆಯೋದಿಲ್ಲ" ಎಂದರು.

ಹಿಂದುತ್ವ ಮೇಲೆ ನಿಜವಾದ ಪ್ರಾಮಾಣಿಕತೆ ಇದ್ದರೆ ಬಿಜೆಪಿ ಕಾರ್ಕಳದಲ್ಲಿ ನನ್ನನ್ನು ಬೆಂಬಲಿಸಲಿ ಎಂದು ಹೇಳಿದರು. 

Ads on article

Advertise in articles 1

advertising articles 2

Advertise under the article