-->
ಗಲ್ಫ್ ರಾಷ್ಟ್ರದಲ್ಲಿ ರಸ್ತೆ ಅಪಘಾತ: ಮಂಗಳೂರು ಮೂಲದ ಮೂವರು ಮೃತ್ಯು

ಗಲ್ಫ್ ರಾಷ್ಟ್ರದಲ್ಲಿ ರಸ್ತೆ ಅಪಘಾತ: ಮಂಗಳೂರು ಮೂಲದ ಮೂವರು ಮೃತ್ಯು


ಮಂಗಳೂರು: ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸೇರಿ ಒಟ್ಟು ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಕಳೆದ ರಾತ್ರಿ ನಡೆದಿದೆ.

ಅಕೀಲ್, ನಾಸಿರ್, ರಿಝ್ವಾನ್, ಶಿಹಾಬ್ ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಸೌದಿ ಅರೇಬಿಯಾದ ರಿಯಾದ್ ಪ್ರಾಂತ್ಯದ ಖುರೈಸ್ ರಸ್ತೆಯ ಬಳಿ ಕಳೆದ ರಾತ್ರಿ ಈ ಅಪಘಾತ ಸಂಭವಿಸಿದೆ.

ನಾಲ್ವರು ಕಾರಿನಲ್ಲಿ ಹೋಗುತ್ತಿದ್ದಾಗ ಖುರೈಸ್ ರಸ್ತೆಯ ಬಳಿ ಒಂಟೆಗೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಕಾರಿನಲ್ಲಿದ್ದವರು SAQCO ಎಂಬ ಕಂಪನಿಯಲ್ಲಿ ನೌಕರರಾಗಿದ್ದರು. ಕಾರಿನಲ್ಲಿದ್ದ ಓರ್ವ ಬಾಂಗ್ಲಾದೇಶದ ಯುವಕ ಕೂಡ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಮೃತದೇಹಗಳನ್ನು ಅಲ್ ಹಸ್ಸಾ ಆಸ್ಪತ್ರೆಗೆ ಸಾಗಿಸಲಾಗಿದ್ದು, ಸಂತ್ರಸ್ತ ಕುಟುಂಬವನ್ನು ಸಂಪರ್ಕಿಸಿ ಮಾಹಿತಿ ನೀಡಲಾಗಿದೆ.

ಅಕೀಲ್ ಅವರು ಮಂಗಳೂರಿನ ಬೋಳಾರ್ ನಿವಾಸಿಯಾಗಿದ್ದು, ರಿಝ್ವಾನ್ ಹಳೆಯಂಗಡಿ ಕದಿಕೆ ನಿವಾಸಿ ಎಂದು ತಿಳಿದುಬಂದಿದೆ.

Ads on article

Advertise in articles 1

advertising articles 2

Advertise under the article