-->
ನಾಗರ ಹಾವಿನ ವಿಸ್ಮಯಕ್ಕೆ ಬೆಚ್ಚಿಬಿದ್ದ ಕುರುಡುಪದವಿನ ಜನತೆ!!

ನಾಗರ ಹಾವಿನ ವಿಸ್ಮಯಕ್ಕೆ ಬೆಚ್ಚಿಬಿದ್ದ ಕುರುಡುಪದವಿನ ಜನತೆ!!

 


ಬಂಟ್ವಾಳ: ನಾಗರ ಹಾವು ಕಡಿತಕ್ಕೊಳಗಾಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕುರುಡುಪದವಿನಲ್ಲಿ ನಡೆದಿದೆ.  ಚೋಮು ಎಂಬವರು ಮೃತಪಟ್ಟ ಮಹಿಳೆ. ಆದ್ರೆ ಇಲ್ಲಿ ಅಚ್ಚರಿಯೊಂದು ನಡೆದಿದೆ. ಹೌದು ಅಂತ್ಯಸಂಸ್ಕಾರದ ವಿಧಿಯ ಕೊನೆಯ ಭಾಗದಲ್ಲಿ ನೀರು ಇಡುವ ಸಂಪ್ರದಾಯ ನಡೆದಿತ್ತು. ವಿಸ್ಮಯವೆಂದರೆ, ಈ ಸಂಪ್ರದಾಯದ ಸಂದರ್ಭದಲ್ಲಿ ಆಗಮಿಸಿದ ನಾಗರ ಹಾವು ಚೊಂಬುನಲ್ಲಿಟ್ಟಿದ್ದ ನೀರನ್ನು ಕುಡಿದು ತೆರಳಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ.

ಹೌದು, ಇದು ನಂಬಲು ಕಷ್ಟವಾದರೂ ನಂಬಲೇಬೇಕಾದ ಸುದ್ದಿ. ಮಹಿಳೆಯ ಸಾವಿಗೆ ಕಾರಣವಾದ ನಾಗರ ಹಾವು  ಆಕೆಯ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದೆ ಎಂದರೆ ವಿಸ್ಮಯವಲ್ಲದೇ ಮತ್ತೇನು?

ಅಂತ್ಯಸಂಸ್ಕಾರದ ವಿಧಿ ಕಳೆದ ಮೇಲೆ ಮನೆ ಚಾವಡಿಯಲ್ಲಿ ನೀರು ಇಡುವ ಸಂಪ್ರದಾಯ ಇದೆ. ಅದರಂತೆ ಮನೆ ಚಾವಡಿಯಲ್ಲಿ ಬೂದಿ ಹರಡಿ ಅದರ ನಡುವಿನಲ್ಲಿ ಚೊಂಬುವೊಂದರಲ್ಲಿ ನೀರು ಇಡಲಾಗಿತ್ತು.

ಮನೆ ಹಿಂಬದಿ ಬಾಗಿಲು ಭದ್ರ ಪಡಿಸಲಾಗಿತ್ತು. ಮುಂಬಾಗಿಲಿನಲ್ಲಿ ನಾಲ್ಕು ಮಂದಿ ಜನ ಮಲಗಿದ್ದರು. ಆದರೂ ನಾಗರ ಹಾವು ಬಂದು ಚೊಂಬುನಲ್ಲಿದ್ದ ನೀರನ್ನು ಕುಡಿದು ತೆರಳಿದೆಯಂತೆ. ಹಾವು ಬಂದಿರುವುದಕ್ಕೆ ಸಾಕ್ಷಿ ಎಂಬಂತೆ ಬೂದಿ ಮೇಲೆ ಹರಡಿರುವ ಹಾವಿನ ಗುರುತನ್ನು ತೋರಿಸುತ್ತಾರೆ ಮನೆಯವರು.

ಇದಕ್ಕೂ ಮಿಗಿಲಾದ ವಿಷಯವೇನೆಂದರೆ, ಚೋಮು ಅವರ ಸಾವಿಗೆ ಕಾರಣವಾದ ನಾಗರ ಹಾವನ್ನು ಹಾವು ಹಿಡಿಯುವವರು ಬಂದು ಹಿಡಿದುಕೊಂಡು ಕೊಂಡೊಯ್ದಿದ್ದರು. ಹಾಗಾದರೆ ನೀರು ಕುಡಿಯಲು ಬಂದ ಹಾವು ಯಾವುದು ಎನ್ನುವುದೇ ದೊಡ್ಡ ಪ್ರಶ್ನೆ.

ಅದೇನಿದ್ದರೂ, ಸರಳ ಸಜ್ಜನಿಕೆಯ ಚೋಮು ಅವರ ಸಾವಿಗೆ ಜನರು ಮರುಕ ವ್ಯಕ್ತಪಡಿಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article