PUTTUR: ಪುತ್ತೂರು ಬಿಜೆಪಿಗೆ ನೂತನ ಸಾರಥಿಗಳು!!
ಪುತ್ತೂರು: ಪುತ್ತೂರು ನಗರ ಮಂಡಲ ಮತ್ತು ಗ್ರಾಮಾಂತರ ಮಂಡಲಗಳಿಗೆ ನೂತನ ಅಧ್ಯಕ್ಷರ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ ಮಾಡಲಾಗಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ನೂತನ ಪದಾಧಿಕಾರಿಗಳ ಆಯ್ಕೆ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದ್ದಾರೆ.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಸನ್ನಕುಮಾರ್ ಮಾರ್ತ ಅವರನ್ನು ನಿಯುಕ್ತಿಗೊಳಿಸಲಾಗಿದೆ. ಪ್ರಸನ್ನಕುಮಾರ್ ಮಾರ್ತ ಅವರು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅಧ್ಯಕ್ಷರಾಗಿದ್ದರು.
ಪುತ್ತೂರು ನಗರ ಮಂಡಲ ಅಧ್ಯಕ್ಷರಾಗಿ ಶಿವಕುಮಾರ್ ಪಿ.ಬಿ ಕಲ್ಲಿಮಾರ್ ಮತ್ತು ಪ್ರಧಾನ ಕಾರ್ಯದರ್ಶಿಗಳಾಗಿ ನಾಗೇಶ್ ಪ್ರಭು ಮತ್ತು ಅನಿಲ್ ತೆಂಕಿಲ ಅವರನ್ನು ಆಯ್ಕೆ ಮಾಡಲಾಗಿದೆ.ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾಗಿ ವಿಟ್ಲ ಶಕ್ತಿಕೇಂದ್ರ ವ್ಯಾಪ್ತಿಯ ದಯಾನಂದ ಶೆಟ್ಟಿ ಉಜಿರೆಮಾರ್, ಪ್ರಧಾನ ಕಾರ್ಯದರ್ಶಿಗಳಾಗಿ ಉಮೇಶ್ ಗೌಡ ಕೋಡಿಯಡ್ಕ ಮತ್ತು ಪ್ರಶಾಂತ್ ನೆಕ್ಕಿಲಾಜೆ ಅವರನ್ನು ನೇಮಕ ಮಾಡಲಾಗಿದೆ. ಈ ಪೈಕಿ ಅನಿಲ್ ತೆಂಕಿಲ ಮತ್ತು ಉಮೇಶ್ ಗೌಡ ಕೋಡಿಯಡ್ಕ ಅವರು ಈ ಹಿಂದೆ ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದರು.