.jpeg)
BANTWALA: ಸುಪಾರಿ ವ್ಯಾಪಾರಿ ಕೃಷಿಕರಿಗೆ ವಂಚಿಸಿ ಪರಾರಿ!?
Wednesday, June 11, 2025
ಸ್ಥಳೀಯ ಕೃಷಿಕ ಮಹಿಳೆಯೊಬ್ಬರು ತಮ್ಮ ಬ್ಯಾಂಕ್ ಸಾಲದ ಮೊತ್ತ ಪಾವತಿಯ ಹಿನ್ನಲೆಯಲ್ಲಿ ವ್ಯಾಪಾರಿಯ ಬಳಿ ಹಣಕ್ಕಾಗಿ ಹೋದಾಗ ಆತ ಪರಾರಿಯಾಗಿರುವುದು ಗಮನಕ್ಕೆ ಬಂದಿದೆ. ಬಳಿಕ ಕೃಷಿಕರೆಲ್ಲರು ಒಂದಾಗಿ ಆತನ ವಿರುದ್ದ ದೂರು ನೀಡಲು ಮುಂದಾಗಿದ್ದಾರೆ.
ಈತ ಸ್ಥಳೀಯ ಕೃಷಿಕರ ವಿಶ್ವಾಸಾರ್ಹ ವರ್ತಕನಾಗಿದ್ದು, ಕಳೆದ ಎರಡು ಮೂರು ದಶಕಗಳಿಂದ ಕೃಷಿಕರು ಈತನಿಗೆ ಒಣ ಅಡಿಕೆ ನೀಡಿ ಸ್ವಲ್ಪ ಸಮಯದ ಬಳಿಕ ಹಣ ನೀಡುತ್ತಿದ್ದರು. ಆತ ಯಾವುದೇ ರೀತಿಯಲ್ಲಿ ವಂಚಿಸದೆ ಕೃಷಿಕರ ಅಗತ್ಯಕ್ಕೆ ತಕ್ಕಂತೆ ಹಣ ನೀಡುತ್ತಿದ್ದನು. ಆದರೆ ಈ ಬಾರಿ ಒಬ್ಬಬ್ಬ ಕೃಷಿಕನಿಗೆ ಲಕ್ಷಾಂತರ ರೂ ಹಣ ವಂಚನೆ ಮಾಡಿದ್ದು ಒಟ್ಟು ಮೊತ್ತ 10 ಕೋಟಿ ಆಗಬಹುದೆಂದು ಕೃಷಿಕರು ಆರೋಪಿಸಿದ್ದಾರೆ.