-->
PUTTUR: ನವೆಂಬರ್ ನಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ!!

PUTTUR: ನವೆಂಬರ್ ನಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ!!


ಪುತ್ತೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವರಾಜ ಅರಸು ಅವರಿಗಿಂತ ಒಂದು ದಿನ ಹೆಚ್ಚು ಆಡಳಿತ ಮಾಡುತ್ತಾರೆ. ಆದರೆ ನವೆಂಬರ್ ತಿಂಗಳ ಒಳಗಾಗಿ ಅವರು ರಾಜೀನಾಮೆ ನೀಡುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಕೊಡದಿದ್ದರೆ ಡಿಕೆಶಿ ಬಲವಂತವಾಗಿ ಕುರ್ಚಿ ಎಳೆದುಕೊಂಡು ಕುಳಿತುಕೊಳ್ಳುತ್ತಾರೆ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಕಡಬ ತಾಲೂಕಿನ ಸವಣೂರು ಬಳಿಯ ಆರೆಲ್ತಡಿ ಗ್ರಾಮದೈವ ಕೆಡೆಂಜೋಡಿತ್ತಾಯಿ ದೈವಸ್ಥಾನದಲ್ಲಿ ತಂಬಿಲ ಸೇವೆ ನಡೆಸಿದ ಬಳಿಕ ಕುಂಜಾಡಿಯಲ್ಲಿ  ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಡಿಕೆಶಿ ಮತ್ತು ಸಿದ್ದರಾಮಯ್ಯ ಅವರು ಅಧಿಕಾರ 50-50 ಮಾಡಿಕೊಂಡಿದ್ದಾರೆ ಎಂದು ನಾನು ಸಂಡೂರಿನಲ್ಲಿ ನಡೆದ ಉಪಚುನಾವಣೆಯ ಸಂದರ್ಭದಲ್ಲಿಯೇ ಹೇಳಿದ್ದೆ. ಅದೀಗ ನಿಜವಾಗುತ್ತಿದೆ. ಡಿಕೆಶಿ ಈಗಾಗಲೇ ಸಿಎಂ ಕುರ್ಚಿಗೆ ಬುನಾದಿ ಹಾಕಲು ಶುರು ಮಾಡಿದ್ದಾರೆ. ನನಗೆ ತಿಳಿದ ಮಾಹಿತಿ ಪ್ರಕಾರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುತ್ತಾರೆ. ಅಧಿಕಾರ ಪಡೆಯಲೇ ಬೇಕು ಎನ್ನುವ ಆತುರದಲ್ಲಿ ಡಿಕೆಶಿ ಇದ್ದಾರೆ. ರಾಜ್ಯದಲ್ಲಿ ಅತೀಹೆಚ್ಚು ದಿನಗಳ ಕಾಲ ಆಡಳಿತ ಆಡಳಿತ ಮಾಡಿದವರು ದೇವರಾಜ ಅರಸು. ಅವರಿಗಿಂತ ಒಂದು ದಿನ ಹೆಚ್ಚು ಆಡಳಿತ ಮಾಡಿದ ಮೇಲೆ ನಾನು ಸೀಟು ಬಿಟ್ಟುಕೊಡುತ್ತೇನೆ ಎಂದು ಹೈಕಮಾಂಡ್ ಮುಂದೆ ಅವರು ಒಪ್ಪಂದ ಮಾಡಿಕೊಂಡಿದ್ದರು ಎಂದರು.

Ads on article

Advertise in articles 1

advertising articles 2

Advertise under the article